Wednesday, July 20, 2011
Tuesday, April 5, 2011
Friday, November 5, 2010
Friday, May 28, 2010
ಹಾಸನದ ಶಂಕರಮಠದಲ್ಲಿ ನಡೆದ ಸುಧಾಕರಶರ್ಮರ ಉಪನ್ಯಾಸದ ಚಿತ್ರಗಳು
Wednesday, May 5, 2010
Monday, July 13, 2009
ಅಶ್ವಮೇಧ ಯಾಗ:
ಇನ್ನು "ಮೇಧ" ಎಂದರೆ " ಸಂಗಮೇ" ಅಂದರೆ ಒಟ್ಟು ಗೂಡಿಸು.ಎಂದಾಗ ರಾಷ್ಟ್ರವನ್ನು ಒಟ್ಟು ಗೂಡಿಸಲು ಮಾಡುವ ಕಾರ್ಯಕ್ರಮಗಳೆಲ್ಲಾ " ಅಶ್ವಮೇಧ ಯಾಗವೇ" ಎಂದಂತಾಯ್ತು. ಎಂತಹಾ ಶ್ರೇಷ್ಠವಾದ ಅರ್ಥ ಇದೆಯಲ್ಲವೇ?. ಅಂದರೆ ವೇದಕ್ಕೆ ಸರಿಯಾದ ಅರ್ಥವಿದೆ,ಆದರೆ ನಾವು ಸರಿಯಾಗಿ ಅರ್ಥೈಸದೆ ತಪ್ಪಾಗಿ ಅರ್ಥೈಸಿದ್ದೇವೆ.
ಗೋಮೇಧ: ಗೋಮೇಧ ಎಂದಾಕ್ಷಣ ಗೋವಿನ ಬಲಿ ಎಂದು ತಪ್ಪಾಗಿ ಅರ್ಥೈಸಲಾಗಿದೆ. ಆದರೆ ಗೋ ಎಂದರೆ ಹಸು ಎಂದಷ್ಟೇ ಅಲ್ಲ. ಯಾಸ್ಕರ ಪ್ರಕಾರ ಗೋ ಎಂದರೆ " ಇಂದ್ರಿಯ " ಎಂದೂ ಅರ್ಥವಿದೆ." ವಾಕ್" ವಾಣಿ ಎಂದೂ ಅರ್ಥವಿದೆ.ಇಲ್ಲಿ ಗೋಮೇಧ ಎಂದರೆ "ವಾಕ್ ಸಂಯಮ" ಎಂದು ಅರ್ಥ. ಮಾತನ್ನು ನಿಯಂತ್ರಣದಲ್ಲಿಡು ಎಂದು ಅರ್ಥ. ಅಂದರೆ ವಾಕ್ ಸಂಯಮ ಯಜ್ಞಕ್ಕೆ ಗೋಮೇಧಾ ಎಂದು ಹೆಸರು.ಗೋಮೇಧಾ ಎಂದರೆ ಹಸುವನ್ನು ಬಲಿಕೊಡುವ ಯಜ್ಞವಲ್ಲ.ವೇದಗಳ ಮೂಲ ಸಿದ್ಧಾಂತವೇ ಅಹಿಂಸೆಯಾದ್ದರಿಂದ ಈ ಅರ್ಥಗಳು ನಾವು ಹುಡುಕಿದರೆ ಸಿಗುತ್ತವೆ.ಮಾತನ್ನು ಹೇಗೆ ಆಡಬೇಕೆಂದೂ ವೇದದಲ್ಲಿಯೇ ಹೇಳಿದೆ. "ಹಿಟ್ಟನ್ನು ಜರಡಿ ಆಡಿದಂತೆ ಜರಡಿಯಾಡಿ ಮಾತನಾಡು" ಎಂದು ಹೇಳಿದೆ. ಹಿಟ್ಟನ್ನು ಜರಡಿಯಾಡಿ ಕಸ ಕಡ್ಡಿ ತೆಗೆದು ನಂತರವಷ್ಟೇ ರೊಟ್ಟಿ ಮಾಡುವುದಿಲ್ಲವೇ ಹಾಗೆ ಮಾತನ್ನು ಆಡುವ ಮುಂಚೆ ಜರಡಿಯಾಡಿ ಮಾತನಾಡು. ಅಂದರೆ ಮಾತನಾಡುವ ಮುನ್ನ ನಾವಾಡುವ ಮಾತು ಸತ್ಯವೇ, ಎಂದು ತಿಳಿದಿರಬೇಕು.ಇದು ಮೊದಲನೆಯ ಹಂತ. ಎರಡನೆಯದು "ಪ್ರಿಯವೇ" . ನಾನಾಡುವ ಮಾತು ಬೇರೆಯವರಲ್ಲಿ ದ್ವೇಶ ಉಂಟುಮಾಡುತ್ತದೋ, ಉದ್ವೇಗ ಉಂಟುಮಾಡುತ್ತದೋ, ಅಥವಾ ಪ್ರಿಯವಾಗುತ್ತದೋ , ಹಿತವಾಗುತ್ತದೋ ಎಂಬುದನ್ನು ಆಲೋಚಿಸಿ ನಂತರ ನಮ್ಮ ಬಾಯಿಂದ ಮಾತು ಹೊರಬರಬೇಕು. ಈಬಗ್ಗೆ ನಾವು ಯೋಚಿಸಿದ್ದೇವೆಯೇ?
ಈ ಒಂದು ಮಾತಿನ ನಿಯಂತ್ರಣವಿದ್ದರೆ ಮನೆಯಲ್ಲಿ, ಸಮಾಜದಲ್ಲಿ, ದೇಶದಲ್ಲಿ ಅಶಾಂತಿ ಮೂಡುವುದೇ ಇಲ್ಲ. ಮಾತನಾಡುವ ಮುಂಚೆ ಅದು ಸತ್ಯವೇ,ಪ್ರಿಯವೇ, ಹಿತವೇ ಎಂದು ಆಲೋಚಿಸಿ ಮಾತನಾಡಿದರೆ ಸಮಾಜದಲ್ಲಿ ಸಾಮರಸ್ಯಕ್ಕೆ ಬಂಗ ಬರುವುದಿಲ್ಲ.ಸತ್ಯವೂ, ಪ್ರಿಯವೂ, ಹಿತವೂಆದ ಮಾತನ್ನಾಡಿದರೆ ಯಾರಿಗೆ ಇಷ್ಟವಾಗುವುದಿಲ್ಲ? ಭದ್ರೈಷಾಂ ಲಕ್ಷ್ಮೀರ್ನಿಹಿತಾಧಿವಾಚಿ"ಮಂಗಳಕರವಾದ ಸಂಪತ್ತು ,ಶ್ರೇಯಸ್ಕರವಾದ ಹಿತ ಅಂತಹಾ ಮಾತಿನಲ್ಲಿ ನೆಲೆಗೊಂಡಿದೆ. ಬ್ಯಾಂಕಿನಲ್ಲಿರುವ ಡಿಪಾಸಿಟ್ ನಮ್ಮನ್ನು ಕಾಪಾಡುವುದಿಲ್ಲ. ನಿಜವಾದ ಸಂಪತ್ತು ನಮ್ಮ ಮಾತಿನಲ್ಲಿದೆ. ಮಾತು ಸರಿಯಾಗಿದ್ದಲ್ಲಿ ಸಂಪತ್ತನ್ನು ಗಳಿಸುವುದು ಕಷ್ಟವಿಲ್ಲ.ಆದರೆ ಮಾತು ಸರಿಯಿಲ್ಲದಿದ್ದಾಗ ಇರುವ ಸಂಪತ್ತನ್ನೂ ಕಳೆದುಕೊಳ್ಳಬೇಕಾಗುತ್ತದೆ.ಹೀಗೆ ಜರಡಿಯಿಂದಆಡಿಸಿ ಮಾತನಾಡಬೇಕು, ಇದನ್ನು ವಾಕ್ ಸಂಯಮ ಎನ್ನುವರು. ವಾಕ್ ಸಂಯಮ ಯಜ್ಞಕ್ಕೆ ಗೋಮೇಧಾ ಯಜ್ಞ ಎಂದುಕರೆದರು.ಆದರೆ ಅದನ್ನು ಹಸುವನ್ನು ಬಲಿಕೊಡುವ ಒಂದು ಯಜ್ಞಎಂದು ತಪ್ಪಾಗಿ ಅರ್ಥೈಸಿ ಹಸುವನ್ನು ಬಲಿಕೊಟ್ಟು ಅದರ ವಪೆಯನ್ನು ಯಜ್ಞಕ್ಕೆ ಹಾಕಿ, ಇನ್ನು ಯಜ್ಞಕ್ಕೆ ಗೋಬಲಿ ಕೊಟ್ಟಮೇಲೆ ಮಾಂಸವನ್ನು ತಿನ್ನುವುದರಲ್ಲಿ ತಪ್ಪೇನು, ಎಂದೆಣಿಸಿ ಮಾಂಸವನ್ನೂ ಭಕ್ಷಿಸಿದರು.ಇದಕ್ಕಿಂತ ಮೂರ್ಖತನ ಬೇರೊಂದಿದೆಯೇ? ಇಂತಾ ಅನರ್ಥ ಎಲ್ಲಿಯವರೆಗೆ ಬೆಳೆದಿದೆ ಎಂದರೆ "ಗೋಘ್ನ" ಎಂಬ ಮಾತಿದೆ. ಇದಕ್ಕೆ ಏನು ಅರ್ಥೈಸಿದ್ದಾರೆಂದರೆ ಮನೆಗೆ ಬಂದ ಅಥಿತಿಗಳಿಗೆ ಊಟದಲ್ಲಿ ಗೋಮಾಂಸ ಬಡಿಸು. ಗೋಘ್ನ ಎನ್ನುವುದಕ್ಕೆ ಇನ್ನೊಂದು ಅರ್ಥ ಗೋವಿನ ಉತ್ಪತ್ತಿ , ಎಂದರೆ ಹಾಲು ಮೊಸರು, ತುಪ್ಪ ಬಡಿಸಿ ಸತ್ಜರಿಸು ಎಂದು ಅರ್ಥೈಸುವ ಬದಲು ಗೋಮಾಂಸ ಬಡಿಸು ಎಂದು ಅರ್ಥೈಸಿದರು!
ಅಥಿತಿಯನ್ನು ಗೋವಿನಿಂದ ಉಪಚರಿಸಬೇಕೆಂದರೆ ಗೋ ಎಂದರೆ ವಾಕ್ ಎಂತಲೂ ಅರ್ಥವಿರುವುದರಿಂದ ಅಥಿತಿಯನ್ನು ಒಳ್ಳೆಯ ಹಿತವಾದ ಮಾತುಗಳಿಂದ ಉಪಚರಿಸು ಎಂದರ್ಥವಾಗುತ್ತದೆ. ದೊಡ್ದ ದೊಡ್ಡ ವಿಸ್ವಾಂಸರುಗಳೂ ಸಹ ಇದನ್ನು ತಪ್ಪು ತಪ್ಪಾಗಿ ಅರ್ಥೈಸಿದ್ದರ ಪರಿಣಾಮ ಬಹಳ ಅನರ್ಥಗಳು ಸಂಭವಿಸಿವೆ, ವೇದದ ಮುಖಕ್ಕೆ ಮಸಿ ಬಳಿಯುವಂತಹ ಕೆಲಸವಾಗಿದೆ. ಅಂದರೆ ಒಂದೊಂದುಶಬ್ಧವನ್ನೂ ಅರ್ಥಮಾಡಿಕೊಳ್ಳುವಾಗ ಮೂಲ ಸಿದ್ಧಾಂತವನ್ನು ಮರೆತಿದ್ದರಿಂದ ಇಂತಹಾ ಅನರ್ಥಗಳಾಗಿವೆ. ಅಂದರೆ ಮೂಲ ಸಿದ್ಧಾಂತವೇನು? ಯಜ್ಞವೆಂದರೆ ಅಹಿಂಸೆ. ಅದನ್ನೇ ಮರೆತು ಅರ್ಥಹುಡುಕಿದ್ದರಿಂದ ಬಹಳ ಅನರ್ಥಗಳು ಘಟಿಸಿರುವುದು ಸುಳ್ಳಲ್ಲ.